ಕಾರ್ಯಕರ್ತರ, ಹಿರಿಯರ ಪರಿಶ್ರಮದಿಂದ ಬಿಜೆಪಿ ಬೃಹದಾಕಾರದಲ್ಲಿ ಬೆಳೆದುನಿಂತ: ಬಿ.ವೈ.ವಿಜಯೇಂದ್ರ

WhatsApp
Telegram
Facebook
Twitter
LinkedIn

ದಾವಣಗೆರೆ: ಕೋಟ್ಯಂತರ ಕಾರ್ಯಕರ್ತರ ಪರಿಶ್ರಮದಿಂದ ಬಿಜೆಪಿ ದೇಶದಲ್ಲಿ ಮತ್ತು ರಾಜ್ಯದಲ್ಲಿ ಅತಿ ದೊಡ್ಡ ಪಕ್ಷವಾಗಿ ಬೆಳೆದುನಿಂತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ವಿಶ್ಲೇಷಿಸಿದರು.

ಸೋಮವಾರ ದಾವಣಗೆರೆ ಜಿಲ್ಲೆಯ ಬಿಜೆಪಿ ಕಚೇರಿಯಲ್ಲಿ ಏರ್ಪಡಿಸಿದ್ದ ಬಿಜೆಪಿ ಸಂಸ್ಥಾಪಕರ ದಿನಾಚರಣೆಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ದೇಶ ಮೊದಲು ಎಂಬ ವಿಚಾರಧಾರೆಯನ್ನು ಮುಂದಿಟ್ಟುಕೊಂಡು ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ನ್ಯಾಯ ಕೊಡುವ ಚಿಂತನೆಯೊಂದಿಗೆ ಬಿಜೆಪಿ ದೇಶದುದ್ದಕ್ಕೂ ಬೆಳೆದುನಿಂತಿದೆ ಎಂದು ತಿಳಿಸಿದರು.

ದೇಶಕ್ಕೆ ಅನ್ನ ಕೊಡುವ ರೈತ ಎಷ್ಟು ಮುಖ್ಯವೋ, ಈ ದೇಶದ ಗಡಿಯನ್ನು ಕಾಯುವ ಯೋಧರು ಕೂಡ ಅಷ್ಟೇ ಮುಖ್ಯ ಎಂಬ ಭಾವನೆಯಿಂದ ನರೇಂದ್ರ ಮೋದಿಜೀ ಅವರ ದಿಟ್ಟ ನಾಯಕತ್ವದ ಅಡಿಯಲ್ಲಿ ದೇಶ ಮುನ್ನಡೆಸಲಾಗುತ್ತಿದೆ. ಇದಕ್ಕಾಗಿ ನಾವಿಂದು ದೇಶ ಕಾಯುವ ಯೋಧರನ್ನು ಗೌರವಿಸಿದ್ದೇವೆ ಎಂದು ಹೇಳಿದರು.

ವಾಜಪೇಯಿ, ಅಡ್ವಾಣಿ ಅವರ ನೇತೃತ್ವದಲ್ಲಿ ಪಕ್ಷ ಬೆಳೆದುಬಂದದ್ದನ್ನು ಮರೆಯಲು ಸಾಧ್ಯವಿಲ್ಲ. ಇಲ್ಲಿ ಬಿಜೆಪಿ ಬೆಳೆಯಲು ಮಾಜಿ ಸಂಸದ ಮಲ್ಲಿಕಾರ್ಜುನಪ್ಪ ಅವರ ಕೊಡಿಗೆ ಅಪಾರವಾಗಿದೆ. ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪ, ಅನಂತಕುಮಾರ್, ವಿ.ಎಸ್.ಆಚಾರ್, ತಂಗ, ಶಂಕರಮೂರ್ತಿ ಸೇರಿ ಅನೇಕ ಹಿರಿಯರ ತಪಸ್ಸು, ಪರಿಶ್ರಮದಿಂದ ನಗರಕ್ಕೆ ಸೀಮಿತವಾಗಿದ್ದ ಬಿಜೆಪಿಯನ್ನು ಹಳ್ಳಿ ಹಳ್ಳಿಗೆ ತೆಗೆದುಕೊಂಡು ಹೋಗಲು ಸಾಧ್ಯವಾಗಿದೆ ಎಂದು ನುಡಿದರು.

ಬಿಜೆಪಿ ದೇಶದಲ್ಲಿ ಮತ್ತು ರಾಜ್ಯದಲ್ಲಿ ಬಹಳ ಬೃಹದಾಕಾರದಲ್ಲಿ ಬೆಳೆದುನಿಂತಿದೆ. ಅನೇಕ ಹಿರಿಯರು ತನು, ಮನ, ಧನವನ್ನು ಅರ್ಪಿಸಿ ತ್ಯಾಗ, ಬಲಿದಾನದ ಮೂಲಕ ಬಿಜೆಪಿ ಇಷ್ಟು ಎತ್ತರಕ್ಕೆ ಬೆಳೆದುನಿಂತಿದೆ. ಇದಕ್ಕೆ ನಿದರ್ಶನವೆಂಬಂತೆ 25ಕ್ಕೂ ಹೆಚ್ಚು ದೇಶಗಳು ತಮ್ಮ ದೇಶದ ಅತ್ಯುನ್ನತ ಗೌರವವನ್ನು ಪ್ರಧಾನಿ ಮೋದಿಜೀ ಅವರಿಗೆ ನೀಡಿದ್ದಾರೆ. ಆದ್ದರಿಂದ ಬಿಜೆಪಿಯನ್ನು ಇನ್ನಷ್ಟು ಬಲಪಡಿಸಲು ಕಾರ್ಯಕರ್ತರಿಗೆ ಹೆಗಲಿಗೆ ಹೆಗಲು ನೀಡಬೇಕಿದೆ. ಸಂಕಲ್ಪದೊಂದಿಗೆ ನಾವೆಲ್ಲ ಸಂಘಟನೆಗಾಗಿ ಶ್ರಮಿಸಬೇಕಿದೆ ಎಂದರು.

ಕಾರ್ಯಕ್ರಮದಲ್ಲಿ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಶಾಸಕರು, ಮಾಜಿ ಶಾಸಕರು, ಸಚಿವರು, ಪಕ್ಷದ ಅನೇಕ ಪ್ರಮುಖರು ಭಾಗವಹಿಸಿದ್ದರು.

Praja Neralu   About Us
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon