ಯಾವ ಕ್ಷೇತ್ರವೂ ಸಹಕಾರ ಕ್ಷೇತ್ರದಿಂದ ಹೊರತಾಗಿರಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ

WhatsApp
Telegram
Facebook
Twitter
LinkedIn

ಬೆಂಗಳೂರು: ಯಾವ ಕ್ಷೇತ್ರವೂ ಸಹಕಾರ ಕ್ಷೇತ್ರದಿಂದ ಹೊರತಾಗಿರಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಶುಕ್ರವಾರ ಕರ್ನಾಟಕ ರಾಜ್ಯ ಸಹಕಾರ ಸಂಘಗಳ ನಿಬಂಧಕರ ನೂತನ ಆಡಳಿತ ಕಚೇರಿ ಸಹಕಾರ ಸಮೃದ್ಧಿ ಸೌಧವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. 2023 ರಲ್ಲಿ ಕಟ್ಟಡಕ್ಕೆ ಭೂಮಿ ಪೂಜೆಯನ್ನು ನೆರವೇರಿಸಿದ್ದು, ಮೂರು ವರ್ಷಗಳಲ್ಲಿ 19.43 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದೆ ಎನ್ನುವುದು ಸಂತಸದ ವಿಚಾರ ಎಂದರು.

ನೆಹರೂ ಅವರು ಪ್ರಧಾನಿಗಳಾಗಿದ್ದ ಸಂದರ್ಭದಲ್ಲಿ ಒಂದು ಊರಿನಲ್ಲಿ ಒಂದು ಶಾಲೆ, ಪಂಚಾಯತಿ ಮತ್ತು ಸಹಕಾರ ಸಂಘ ಇರಲೇಬೇಕು.ಆಗ ಮಾತ್ರ ಆ ಊರಿನ ಸರ್ವತೋಮುಖ ಅಭಿವೃದ್ಧಿ ಸಾಧ್ಯ ಎಂದಿದ್ದರು. ಪ್ರಸ್ತುತ ಹಾಲಿನ ಸೊಸೈಟಿಗಳಾದ ನಂತರ  ಪ್ರತಿ ಊರಿನಲ್ಲಿ ಇದು ಸಾಧ್ಯವಾಗಿದೆ ಎಂದರು.

ಎಲ್ಲರಿಗಾಗಿ ನಾನು, ನನಗಾಗಿ ಎಲ್ಲರೂ ಎಂಬ ಸಹಕಾರಿ ತತ್ವದಡಿ ರಾಜ್ಯ ಅಭಿವೃದ್ಧಿಯಾಗುತ್ತಿದೆ. ರೈತರ ಬೆಳವಣಿಗೆಗೆ ಸಹಕಾರ ಇಲಾಖೆ ಇದು ಕಾರ್ಯ ನಿರ್ವಹಿಸಬೇಕು. ಶೇ 60% ಜನ ಗ್ರಾಮೀಣ ಭಾಗದಲ್ಲಿ ವಾಸಿಸುತ್ತಿದ್ದು, ಗ್ರಾಮದ ಜನರಿಗೆ ಅಗತ್ಯ ಸೌಲಭ್ಯಗಳನ್ನು ಸಹಕಾರಿ ಸಂಘಗಳ ಮೂಲಕ ನೀಡಲಾಗುತ್ತಿದೆ ಎಂದು ತಿಳಿಸಿದರು

ಹಾಲಿನ ಸೊಸೈಟಿಗಳು ಬಂದ ನಂತರ ರೈತರ ಪರಿಸ್ಥಿತಿ ಉತ್ತಮವಾಗಿದ್ದು, ಒಂದು ಕೋಟಿ ಲೀಟರ್ ಹಾಲು ದಿನವೊಂದಕ್ಕೆ ಉತ್ಪಾದನೆಯಾಗುತ್ತಿದೆ. ಅತ್ಯಂತ ಲಾಭದಾಯಕವಾದ ಉಪಕಸುಬಾಗಿ ಇದು ಸಹಕಾರ ಕ್ಷೇತ್ರದಿಂದ ಸಾಧ್ಯವಾಗಿದೆ. ಆದರೆ ಉತ್ತರ ಕರ್ನಾಟಕದಲ್ಲಿ ಹಾಲು ಉತ್ಪಾದನೆ ಹೆಚ್ಚಾಗಬೇಕು.  ಎಂದರು.

ಹಿಂದೆ ನಾನು ಸಹಕಾರ ಸಚಿವರಾಗಿದ್ದ ಸಂದರ್ಭದಲ್ಲಿ ಹಾಲು ಒಕ್ಕೂಟಗಳನ್ನು ಹಾಲು ಡೈರಿಯೊಂದಿಗೆ  ಸೇರ್ಪಡೆ ಮಾಡಲಾಯಿತು. ಇದರಿಂದ ಹಾಲು ಉತ್ಪಾದನೆ ಹೆಚ್ಚಾಗಲು ಸಾಧ್ಯವಾಯಿತು. ಒಟ್ಟಿನಲ್ಲಿ ಸಹಕಾರ ಸೌಧದಲ್ಲಿ ಸೇವೆ ಉತ್ತಮವಾಗಿರಲಿ ಎಂದು ಸಿದ್ದರಾಮಯ್ಯ ಆಶಿಸಿದರು.

ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್, ಸಚಿವ ಹೆಚ್ ಕೆ ಪಾಟೀಲ್, ಶಾಸಕ ರಿಜ್ವಾನ್ ಅರ್ಷದ್, ಮೇಲ್ಮನೆ ಸದಸ್ಯೆ ಬಿಲ್ಕಿಸ್ ಬಾನು, ಸಹಕಾರ ಇಲಾಖೆ ಕಾರ್ಯದರ್ಶಿಗಳು, ಇಲಾಖೆಯ ನಿಬಂಧಕ ಕಾಂತರಾಜು, ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Praja Neralu   About Us
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon