ಬೆಳಗಾವಿ, ಮೇ ೨೮- ಬೆಳಗಾವಿ ಜಿಲ್ಲೆಯ ಸಮಾಜಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಕಿತ್ತೂರ ರಾಣಿಚನ್ನಮ್ಮ, ಡಾ. ಬಿ.ಆರ್.ಅಂಬೇಡ್ಕರ್, ಇಂದಿರಾಗಾಂಧಿ, ಅಟಲ ಬಿಹಾರಿ ವಾಜಪೇಯಿ, ಸಂಗೊಳ್ಳಿ ರಾಯಣ್ಣ ವಸತಿ ಶಾಲೆ/ಕಾಲೇಜುಗಳಲ್ಲಿ ಅತಿಥಿ ಶಿಕ್ಷಕರ/ಉಪನ್ಯಾಸಕರ ಹುದ್ದೆಗಳಿಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿದ ವಿದ್ಯಾರ್ಹತೆ ಹೊಂದಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.\
ಆಸಕ್ತ ಅಭ್ಯರ್ಥಿಗಳು ನಿಗದಿತ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲೆಗಳೊಂದಿಗೆ ಸ್ವ-ವಿವರವನ್ನು (ಬಯೋಡಾಟ್) ಮೇ. ೩೦, ೨೦೨೫ ರ ವರೆಗೆ ಸಮಾಜಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರ ಕಛೇರಿ, ನೆಹರು ನಗರ ಬೆಳಗಾವಿ (ರಾಮದೇವ ಹೋಟೇಲ ಹತ್ತಿರ ) ಇಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಬೆಳಗಾವಿ ಜಿಲ್ಲೆಯ ವಸತಿ ಶಾಲೆಗಳಲ್ಲಿ ಕನ್ನಡ, ಆಂಗ್ಲ, ಗಣಿತ, ವಿಜ್ಞಾನ, ಸಮಾಜ ವಿಜ್ಞಾನ, ಕಂಪ್ಯೂಟರ, ದೈಹಿಕ ಶಿಕ್ಷಣ ಹೀಗೆ ಒಟ್ಟು ೧೦೭ ವಿಷಯವಾರು ಅತಿಥಿ ಶಿಕ್ಷಕರ ಹುದ್ದೆಗೆ ಹಾಗೂ ಕಾಲೇಜುಗಳಲ್ಲಿ ಕನ್ನಡ ಭಾಷೆ, ಆಂಗ್ಲ ಭಾಷೆ, ಭೌತ ಶಾಸ್ತ್ರ, ರಸಾಯನ ಶಾಸ್ತ್ರ, ಗಣಿತ ಶಾಸ್ತ್ರ, ಜೀವ ಶಾಸ್ತ್ರ, ಗಣಕ ಶಾಸ್ತ್ರ, ಉಪನ್ಯಾಸಕರ ಒಟ್ಟು ೧೭ ಅತಿಥಿ ಉಪನ್ಯಾಸಕರ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕಛೇರಿಯ ದೂರವಾಣಿ ಸಂಖ್ಯೆ: ೮೦೯೫೩೦೩೮೨೮, ೯೭೩೧೧೬೮೪೯೭ ಗೆ ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.