ಗದಗ: ಸಣ್ಣನೀರಾವರಿ ಇಲಾಖೆ ಕಾಮಗಾರಿ ಗುತ್ತಿಗೆ ನೀಡಲು 5 ಲಕ್ಷ ಲಂಚ ಸ್ವೀಕರಿಸುವ ವೇಳೆ ಶಿರಹಟ್ಟಿಯ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಮತ್ತು ಅವರ ಆಪ್ತಕಾರ್ಯದರ್ಶಿಗಳಿಬ್ಬರು ಲೋಕಾಯುಕ್ತ ಟ್ರ್ಯಾಪ್ ಕಾರ್ಯಾಚರಣೆಯಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.

ಗುತ್ತಿಗೆದಾರನಿಂದ ಕಮಿಷನ್ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಎಸ್.ಪಿ ಸಿದ್ದಲಿಂಗಪ್ಪ ಅವರ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಈ ವೇಳೆ ಶಾಸಕ ಚಂದ್ರು ಲಮಾಣಿ, ಪಿಎಗಳಾದ ಮಂಜುನಾಥ್, ಗುರು ಲಮಾಣಿ ಅವರುಗಳನ್ನು ಬಂಧಿಸಲಾಗಿದೆ.

11 ಲಕ್ಷ ರೂ ಲಂಚಕ್ಕೆ ಬೇಡಿಕೆ ಇಡಲಾಗಿತ್ತು, ಮುಂಗಡವಾಗಿ 5 ಲಕ್ಷ ಹಣವನ್ನು ಪಡೆಯುತ್ತಿದ್ದಾಗ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿರುವ ಶಾಸಕರ ಒಡೆತನದ ಬಾಲಾಜಿ ಆಸ್ಪತ್ರೆಯಲ್ಲಿ ಈ ಕಾರ್ಯಾಚರಣೆಯನ್ನು ಕೈಗೊಳ್ಳಲಾಗಿದೆ.















