ಡಾ. ಅಂಬೇಡ್ಕರ್ ಪ್ರಶಸ್ತಿಗೆ ಭಾಜನರಾದ ಶೋಭಾ ಗಸ್ತಿ, ಹನುಮಂತರಾವ್ ಬಿ. ದೊಡ್ಡಮನಿ ಅವರಿಗೆ ಅಭಿನಂದನೆ

WhatsApp
Telegram
Facebook
Twitter
LinkedIn

ಬೆಂಗಳೂರು: ದೇವದಾಸಿ ವಿಮುಕ್ತಿ ಕ್ಷೇತ್ರದಲ್ಲಿ ಸಲ್ಲಿಸಿದ ಅಪೂರ್ವ ಸೇವೆಯನ್ನು ಪರಿಗಣಿಸಿ ಶೋಭಾ ಗಸ್ತಿ ಹಾಗೂ ಸಾಹಿತ್ಯ ಹಾಗೂ ಸಂಘಟನೆ ಕ್ಷೇತ್ರದಲ್ಲಿ ಗಮನಾರ್ಹ ಕೊಡುಗೆ ನೀಡಿದ ಹನುಮಂತರಾವ್ ಬಿ. ದೊಡ್ಡಮನಿ ಅವರಿಗೆ 2026 ನೇ ಸಾಲಿನ ಡಾ. ಬಿ.ಆರ್. ಅಂಬೇಡ್ಕರ್ ಪ್ರಶಸ್ತಿಗೆ ದೊರೆತಿದ್ದು, ಇವರನ್ನು ಕರ್ನಾಟಕ ರಾಜ್ಯ ಮಾದಿಗ ಗುತ್ತಿಗೆದಾರರ ಸಂಘದಿಂದ ಮಂಗಳವಾರ ಗೌರವಿಸಲಾಯಿತು.

ಈ ಕುರಿತು ಸಂಘದ ಸಂಸ್ಥಾಪಕ ರಾಜ್ಯಾಧ್ಯಕ್ಷ ಎಸ್ ಸಂಗಮೇಶ್ ಮಾತನಾಡಿ, ಅರ್ಹರನ್ನು ಗುರುತಿಸಿ ಡಾ. ಅಂಬೇಡ್ಕರ್ ಪ್ರಶಸ್ತಿ ನೀಡಲಾಗಿದೆ. ಸೇವೆ, ಸಂಘಟನೆ, ರಚನಾತ್ಮಕ ಕೆಲಸಗಳ ಮೂಲಕ ಇವರು ಸಮಾಜದಲ್ಲಿ ಬದಲಾವಣೆ ತಂದಿದ್ದಾರೆ. ಇವರು ನಮಗೆಲ್ಲರಿಗೂ ಮಾದರಿ ಎಂದರು.

ವಿವಿಧ ಕ್ಷೇತ್ರಗಳಲ್ಲಿ ವಿಶಿಷ್ಟ ಸಾಧನೆ ಮಾಡಿದ ಇವರು ಅನುಕರಣೀಯ. ಯುವ ಸಮೂಹಕ್ಕೆ ಇವರು ಪ್ರೇರಣೆ. ಸಮಾಜದ ಉನ್ನತಿ, ಸಮಾನತೆ ಮತ್ತು ಸಂಘಟಿತ ಹೋರಾಟಕ್ಕೆ ಇಂತಹ ವ್ಯಕ್ತಿಗಳ ಕೊಡುಗೆ ಅಪಾರವಾಗಿದೆ. ಸಮಾಜದ ಉನ್ನತಿ, ಸಮಾನತೆ ಮತ್ತು ಸಂಘಟಿತ ಹೋರಾಟಕ್ಕೆ ಇಂತಹ ವ್ಯಕ್ತಿಗಳ ಕೊಡುಗೆ ಪ್ರೇರಣಾದಾಯಕವಾಗಿದೆ ಎಂದು ಹೇಳಿದರು.

ಗೌರವಿಸುವ ವೇಳೆ ವಕೀಲರಾದ ಹನುಮೇಶ್ ಗುಂಡೂರು, ಅಣ್ಣಾರಾವ್ ಪಾಟೀಲ್ (ಗುಲ್ಬರ್ಗ), ನಿಂಗರಾಜ ಗುಳೆ, ಬಿನಯ್ ಕುಮಾರ್, ಮಲ್ಲಿಕಾರ್ಜುನ್ ಬಾಂಬೇಕರ ಇದ್ದರು.

Praja Neralu   About Us
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon