ಕೊರಚರ ಕುರಿತ ಸಂಶೋಧನೆ ಕಷ್ಟದಾಯಕವಾಯಿತ್ತು: ಡಾ. ಗಿರಿಧರ ರಾವ್ ಹವಲ್ದಾ‌ರ್

WhatsApp
Telegram
Facebook
Twitter
LinkedIn

ಬೆಂಗಳೂರು: ಅತ್ಯಂತ ಹಿಂದುಳಿದ ಕೊರಚ ಸಮುದಾಯದ ಬಗ್ಗೆ ಸಂಶೋಧನೆ ನಡೆಸುವುದು ನಮಗೆ ಕಷ್ಟದಾಯಕವಾಯಿತ್ತು. 8 ವರ್ಷಗಳ ನಿರಂತರ ಸಂಶೋಧನೆಯಲ್ಲಿ ಮೊದಲ ನಾಲ್ಕು ವರ್ಷ ಕೊರಚ ಜನಾಂಗದ ಯಾರೂ ಕೂಡ ತಮಗೆ ಮಾಹಿತಿಯನ್ನೇ ನೀಡಲಿಲ್ಲ ಎಂದು ಕೊರಚ ಸಂಸ್ಕೃತಿ ಚಿಂತಕ ಹಾಗೂ ಸಂಶೋಧಕ ಡಾ. ಗಿರಿಧರ ರಾವ್ ಹವಲ್ದಾ‌ರ್ ಹೇಳಿದರು.

ಗಾಂಧಿಭವನದ ಮಹಾದೇವ ದೇಸಾಯಿ ಸಭಾಂಗಣದಲ್ಲಿ ಅಖಿಲ ಕರ್ನಾಟಕ ಕೊರಚ ಮಹಾಸಭಾದ ಪ್ರಥಮ ವಾರ್ಷಿಕೋತ್ಸವದ ಅಂಗವಾಗಿ ಎಸ್‌ಎಸ್‌ಎಲ್‌ಸಿ, ಪಿಯುಸಿಯಲ್ಲಿ ಸಾಧನೆ ಮಾಡಿದ ಸಮುದಾಯದ 10 ವಿದ್ಯಾ ರ್ಥಿಗಳಿಗೆ ನಗದು ಒಳಗೊಂಡಂತೆ ಸಾಧನ ಸಿರಿ ಪ್ರತಿಭಾ ಪುರಸ್ಕಾರ ಮತ್ತು ಪ್ರಶಸ್ತಿ ಪತ್ರ ನೀಡಿ ನಂತರ ಮಾತನಾಡಿದ ಅವರು, 14 ಜಿಲ್ಲೆಗಳಲ್ಲಿ 8 ವರ್ಷಗಳ ಕಾಲ ಸಂಚರಿಸಿ ವ್ಯಾಪಕ ಸಂಶೋಧನೆ ಮಾಡಿದೆ. ಆದರೆ ನಾವು ಕೇಳಿದ ಯಾವುದೇ ಮಾಹಿತಿಯನ್ನು ಜನಾಂಗ ನೀಡುತ್ತಿರಲಿಲ್ಲ. ಏಕೆಂದರೆ ಸಮುದಾಯವನ್ನು ಸಮಾಜ ಅತ್ಯಂತ ಕೀಳಾಗಿ ಕಂಡಿದ್ದು ಇದಕ್ಕೆ ಕಾರಣವಾಗಿತ್ತು ಎಂದು ಹೇಳಿದರು.

ಯಾರೊಂದಿಗೂ ಮಾತನಾಡಲು ಕೊರಚರು ಹಿಂಜರಿಯುತ್ತಿದ್ದರು. ಆದರೆ ಇದನೆಲ್ಲ ಮೀರಿ ಕೊರಚರು ಒಂದು ಸಾಂಸ್ಕೃತಿಕ ಅಧ್ಯಯನ ಎಂಬ ಈ ಸಂಶೋಧನಾ ಪ್ರಬಂಧ ಅತ್ಯಮೂಲ್ಯವಾಗಿ ಹೊರಬಂದಿದೆ. ಕೊರಚ ಜನಾಂಗ ಕುರಿತಾದ ಸಾಂಸ್ಕೃತಿಕ ನೆಲೆಗಟ್ಟಿನಲ್ಲಿ ನಡೆದ ಮೊಟ್ಟಮೊದಲ ಸಮಗ್ರ ಸಂಶೋಧನೆ ಎಂಬ ಹೆಗ್ಗಳಿಕೆಗೆ ಇದು ಪಾತ್ರವಾಗಿದೆ ಎಂದರು.

ಒಂದು ಸಮುದಾಯದ ಅಸ್ಥಿತೆಯನ್ನು ಅದರ ಇತಿಹಾಸ, ಭಾಷೆ, ಮತ್ತು ಆಚರಣೆಗಳ ಮೂಲಕ ಹುಡುಕಬೇಕು. ಕೊರಚ ಜನಾಂಗದ ಬದುಕಿನ ಸಂಕೀರ್ಣತೆಗಳನ್ನು, ಅವರ ಕಲೆ, ಸಂಸ್ಕೃತಿ ಮತ್ತು ಸಾಮಾಜಿಕ ಸ್ಥಿತ್ಯಂತರಗಳನ್ನು ಅತ್ಯಂತ ನಿಖರವಾಗಿ ಪ್ರಬಂಧದಲ್ಲಿ ದಾಖಲಿಸಿದ್ದೇನೆ. ಕ್ಷೇತ್ರಕಾರ್ಯದ ಹಸಿ ಅನುಭವಗಳೊಂದಿಗೆ ಶಾಸನೋಕ್ತ ಆಧಾರಗಳನ್ನು ಬಳಸಿಕೊಂಡು ಸಮುದಾಯದ ಏಳುಬೀಳುಗಳನ್ನು ಕಟ್ಟಿಕೊಡುವ ಪ್ರಯತ್ನ ಮಾಡಿದ್ದೇನೆ. ಜಾಗ ತೀಕರಣದ ಅಬ್ಬರದಲ್ಲಿ ಅಲೆಮಾರಿ ಮತ್ತು ಬುಡಕಟ್ಟು ಸಮುದಾಯಗಳು ತಮ್ಮ ಮೂಲ ಸಂಸ್ಕೃತಿಯನ್ನು ಕಳೆದುಕೊಳ್ಳುತ್ತಿವೆ. ಈ ಅಧ್ಯಯನ ಮುಂದಿನ ಪೀಳಿಗೆಗೆ ದಾರಿದೀಪವಾಗಲಿದೆ ಎಂದು ಡಾ. ಗಿರಿಧರ ರಾವ್ ಹವಲ್ದಾರ್ ಎಂದು ಅಭಿಪ್ರಾಯಪಟ್ಟರು.

ಅಖಿಲ ಕರ್ನಾಟಕ ಕೊರಚ ಮಹಾಸಭಾ ರಾಜ್ಯಾಧ್ಯಕ್ಷ ಆದರ್ಶ ಯಲ್ಲಪ್ಪ ಮಾತನಾಡಿ, ಕೊರಚ ಜನಾಂಗ ಆರ್ಥಿಕ, ಸಾಮಾಜಿಕ, ರಾಜಕೀಯ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ಅತ್ಯಂತ ಹಿಂದುಳಿದ ಸಮುದಾಯವಾಗಿದೆ. ಸಮಯದಾಯವನ್ನು ಶೈಕ್ಷಣಿಕವಾಗಿ ಅಭಿವೃದ್ಧಿಪಡಿಸಲು ಮಹಾಸಭಾ ಕಾರ್ಯನಿರ್ವಹಿಸುತ್ತಿದೆ. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತಮ ಸಾಧನೆಮಾಡಿ ಅಧಿ ಕಾರಿಗಳಾಗಿ ಸಮುದಾಯದ ಶ್ರೇಯೋಭಿವೃದ್ಧಿಗಾಗಿ ಶ್ರಮಿಸಬೇಕು ಎಂದರು.

ಹಿರಿಯ ನ್ಯಾಯವಾದಿ ನಾಯಕ್, ಮಹಾಸಭಾದ ಗೌರವಾಧ್ಯಕ್ಷ ಬೋಜರಾಜ್ ಮುಟಗಾರ, ಉಪಾಧ್ಯಕ್ಷ ಸೀತಾರಾಮಯ್ಯ, ಪ್ರಧಾನ ಕಾರ್ಯದರ್ಶಿ ಕೃಷ್ಣಪ್ಪ ಹಾಗೂ ರಾಜ್ಯ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

 

Praja Neralu   About Us
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon