ಬೆಳಗಾವಿ: ಮಂಗಳವಾರ ಲೋಕಾಯುಕ್ತ ಪೊಲೀಸರು ಭ್ರಷ್ಟ ಅಧಿಕಾರಿಗೆ ಬಿಸಿಮುಟ್ಟಿಸಿದ್ದು, ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿ ಮನೆ ಸೇರಿದಂತೆ ಮೂರು ಕಡೆ ದಾಳಿ ನೆಡೆಸಿದ್ದಾರೆ.
ಜಿಲ್ಲಾ ನಗರಾಭಿವೃದ್ಧಿ ಕೋಶದ ಎಇಇ ಅಜೀತ್ ಸಿಂಗ್ ರಜಪೂತ ಗೆ ಸೇರಿದ ಬೆಳಗಾವಿಯ ಆಂಜನೇಯ ನಗರದಲ್ಲಿನ ಮೂರು ಮನೆಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಲಾಗಿದೆ. ಅಕ್ರಮ ಆಸ್ತಿ ಹೊಂದಿರುವ ಆರೋಪದ ಜಿಲ್ಲೆಯ ಹುಕ್ಕೇರಿ, ಅಥಣಿ ತಾಲೂಕಿನ ಮನೆಗಳ ಮೇಲೆ ದಾಳಿ ದಾಳಿ ನಡೆಸಲಾಗಿದೆ. ಈ ವೇಳೆ ಅಕ್ರಮ ಆಸ್ತಿಪಾಸ್ತಿ ಇರುವ ಮಹತ್ವದ ದಾಖಲೆಗಳ ಪರಿಶೀಲನೆ ನಡೆದಿದೆ.
ಈ ವೇಳೆ ಕೋಟ್ಯಾಂತರ ರೂಪಾಯಿ ಮೌಲ್ಯದ ಆಸ್ತಿ, ಚಿನ್ನಾಭರಣ, ಡೆಪಾಸಿಟ್ ಇರುವುದನ್ನು ಪತ್ತೆ ಹಚ್ಚಲಾಗಿದೆ. ಡಿ.ಎಸ್.ಪಿ ಬಿ. ಎಸ್ ಪಾಟೀಲ, ಭರತ ರೆಡ್ಡಿ ನೇತೃತ್ವದಲ್ಲಿ ದಾಳಿ ಮುಂದುವರೆಸಿರುವ ಲೋಕಾ ಪೊಲೀಸರು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.















